BREAKING: ರಾಜ್ಯದ ಜನತೆಗೆ ಭರ್ಜರಿ ಸುದ್ದಿ: ‘ಸಂಪಾದಿತಲೇ ಪರಾಕ್’ ಎಂದು ವರ್ಷದ ಭವಿಷ್ಯವಾಣಿ ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ

ಹೊಸಪೇಟೆ: ಸಂಪಾದಿತಲೇ ಪರಾಕ್ ಎಂದು ಸುಕ್ಷೇತ್ರ ಮೈಲಾರಲಿಂಗೇಶ್ವರ ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ.

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರ ಕ್ಷೇತ್ರದ ಕಾರ್ಣಿಕ ನುಡಿಯನ್ನು ರಾಮಣ್ಣ ಗೊರವಯ್ಯ ದೈವವಾಣಿ ನುಡಿದಿದ್ದಾರೆ. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಾಮಣ್ಣ ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ.

ಕಾರ್ಣಿಕವನ್ನು ವರ್ಷದ ಭವಿಷ್ಯವಾಣಿ ಎಂದು ಹೇಳಲಾಗುತ್ತದೆ. ಈ ಸಲ ಭಾರಿ ಮಳೆ, ಬೆಳೆ ಚೆನ್ನಾಗಿ ಆಗಿ ರೈತರ ಬಾಳು ಹಸನಾಗುತ್ತದೆ ಎಂದು ಕಾರ್ಣಿಕ ನುಡಿ ಅರ್ಥೈಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read