ಬೆಂಗಳೂರು : ಗಣಪ ಸಿನಿಮಾ ಖ್ಯಾತಿಯ ಸ್ಯಾಂಡಲ್ ವುಡ್ ನಟ ಸಂತೋಷ್ ಬಾಲರಾಜ್ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಜಾಂಡಿಸ್ ನಿಂದ ಬಳಲುತ್ತಿದ್ದ ಸಂತೋಷ್ ಅವರ ಸ್ಥಿತಿ ಗಂಭೀರವಾಗಿತ್ತು, ಇದೀಗ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕರಿಯ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ನಟ ಸಂತೋಷ್ ಬಾಲರಾಜ್ ಅವರು ಜಾಂಡಿಸ್ ನಿಂದ ಬಳಲುತ್ತಿದ್ದರು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಂತೋಷ್ ಬಾಲರಾಜ್ ತಂದೆ ಆನೇಕಲ್ ಬಾಲರಾಜ್ ದರ್ಶನ್ ಅಭಿನಯದ ಕರಿಯ ಚಿತ್ರದ ನಿರ್ಮಾಣ ಮಾಡಿದ್ದರು. ಸಂತೋಷ್ ಬಾಲರಾಜ್ ಕರಿಯ-2, ಕೆಂಪ, ಗಣಪ, ಬರ್ಕ್ಲಿ, ಸತ್ಯಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ.