ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಸಂಜಯ್ ದತ್

ಬಾಲಿವುಡ್ ನಟ ಸಂಜಯ್ ದತ್ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಗೆಳೆಯರೊಂದಿಗೆ ದೇವಾಲಯಕ್ಕೆ ಆಗಮಿಸಿದ ಸಂಜಯ್ ದತ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಹುಲಿ ಕುಣಿತದ ಊದು ಪೂಜೆಯಲ್ಲಿ ಅವರು ಭಾಗವಹಿಸಲು ಮುಂಬೈನಿಂದ ಮಂಗಳೂರಿಗೆ ಆಗಮಿಸಿದ್ದ. ಬಿರುವೆರ್ ಕುಡ್ಲ ಸಂಘಟನೆಯ ಹುಲಿ ವೇಷ ಕುಣಿತದ ಊದು ಪೂಜೆಯಲ್ಲಿ ಸಂಜಯ್ ದತ್ ಪಾಲ್ಗೊಂಡಿದ್ದರು.

ತಮ್ಮ ಸ್ನೇಹಿತರೊಂದಿಗೆ ದೇವಾಲಯಕ್ಕೆ ಆಗಮಿಸಿದ ಅವರಿಗೆ ದೇವಸ್ಥಾನ ವತಿಯಿಂದ ಶೇಷವಸ್ತ್ರ, ಪ್ರಸಾದ ನೀಡಿ ಸಲ್ಲಿಸಲಾಗಿದೆ. ಸಂಜಯ್ ದತ್ ಅವರನ್ನು ನೋಡಲು ಭಾರಿ ಸಂಖ್ಯೆಯ ಜನ ಆಗಮಿಸಿದ್ದರು. ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read