ಕೇಂದ್ರೀಯ ವಿವಿಯಲ್ಲಿ ಸರಸ್ವತಿ ಪೂಜೆಗೆ ಆಕ್ಷೇಪ: ವಿದ್ಯಾರ್ಥಿಗಳ ವಾಗ್ವಾದ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗುಂಚಿ ಸಮೀಪ ಇರುವ ಕರ್ನಾಟಕ ಕೇಂದ್ರೀಯ ವಿವಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಗುಂಪು ಸರಸ್ವತಿ ಪೂಜೆಗೆ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಗ್ರಂಥಾಲಯ ಮತ್ತು ಬಿಎಡ್ ವಿಭಾಗದಲ್ಲಿ ವಸಂತ ಪಂಚಮಿ ಅಂಗವಾಗಿ ಸರಸ್ವತಿ, ಗಣೇಶ ಪೂಜೆ, ಹೋಮ ನಡೆಸಲಾಗುತ್ತಿತ್ತು. ವಿಭಾಗಕ್ಕೆ ಆಗಮಿಸಿದ ಕೆಲವು ವಿದ್ಯಾರ್ಥಿಗಳು ಪೂಜೆ, ಹೋಮ ಮಾಡುವುದು ಅಧಿಕೃತವೇ? ಇನ್ನೊಮ್ಮೆ ಈ ರೀತಿ ಪೂಜೆ ಮಾಡಿದರೆ ಕೇಸ್ ಹಾಕಿಸುತ್ತೇವೆ ಎಂದು ಹೇಳಿದ್ದು, ಉಪನ್ಯಾಸಕರೊಂದಿಗೆ ವಾಗ್ವಾದ ನಡೆಸಿದ್ದಾರೆ.

ಸ್ಥಳದಲ್ಲಿದ್ದ ಎಬಿವಿಪಿ ವಿದ್ಯಾರ್ಥಿಗಳು ಇದನ್ನು ತಡೆಯಲು ಯತ್ನಿಸಿದ್ದು, ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ನರೋಣಾ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಎರಡು ಗುಂಪುಗಳ ವಿದ್ಯಾರ್ಥಿಗಳನ್ನು ಸಮಾಧಾನ ಮಾಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read