BIG NEWS : ಮಳೆಯಾಗದ ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಣೆ ಮಾಡುತ್ತೇವೆ : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಮಳೆಯಾಗದ ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಣೆ ಮಾಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಈ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದಿದ್ದವೆ. ಆದಷ್ಟು ಬೇಗ ಮಳೆಯಾಗದ ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಣೆ ಮಾಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆ ವಿಚಾರವಾಗಿ ಮಾತನಾಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಬರಗಾಲ ಪೀಡಿತ ಪ್ರದೇಶ ಘೋಷಣೆ ನಿರ್ಧಾರ ಸರ್ಕಾರ ಮಾಡುತ್ತದೆ. ಸರ್ವೆ ವರದಿ, ಮಳೆ ಅಂಕಿ ಸಂಖ್ಯೆ ನೋಡಿ ತೀರ್ಮಾನ ಆಗುತ್ತದೆ. ಬರಗಾಲ ಪೀಡಿತ ಪ್ರದೇಶ ಘೋಷಣೆ ನಿರ್ಧಾರ ಸರ್ಕಾರದ್ದು
ಎಂದು ಹೇಳಿದ್ದಾರೆ . ರಾಜ್ಯದ ಹಲವು ಕಡೆ ಮುಂಗಾರು ಮಳೆ ಚುರುಕಾಗಿದ್ದು, ಹಲವು ಕಡೆ ಮಳೆ ಬರುತ್ತಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read