BREAKING NEWS: ಸಿಎಂ ಆಗಲೂ ಆಸೆಯಿದೆ; ಅಧ್ಯಕ್ಷನಾಗಲೂ ಆಸೆಯಿದೆ: ಆದ್ರೆ ಪಕ್ಷ ತೀರ್ಮಾನ ಮಾಡಬೇಕು ಎಂದ ಸಚಿವ ಸತೀಶ್ ಜಾರಕಿಹೊಳಿ

ಹಾವೇರಿ: ನಮಗೆ ಸಿಎಂ ಆಗಲೂ ಆಸೆಯಿದೆ; ಅಧ್ಯಕ್ಷನಾಗಲೂ ಆಸೆಯಿದೆ. ಆದರೆ ಅಂತಿಮವಾಗಿ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಈ ಹಿಂದೆ ಸಿಎಂ ಆಗ್ತಾರೆ ಅಂತಾ ಹೆಸರು ಓಡಾಡ್ತಾ ಇತ್ತು. ಈಗ ಅಧ್ಯಕ್ಷ ಆಗ್ತಾರೆ ಅಂತ ಹೆಸರು ಓಡಾಡ್ತಾ ಇದೆ. ಸಿಎಂ ಆಗಬೇಕು ಎಂಬ ಆಸೆಯೂ ಇದೆ; ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯೂ ಇದೆ. ಆದರೆ ಇದೆಲ್ಲ ನಮ್ಮ ಉತ್ಸಾಹ ಅಷ್ಟೇ. ಅಂತಿಮವಾಗಿ ಹೈಕಮಾಂಡ್ ನಿರ್ಧಾರವೇ ಫೈನಲ್. ನಾವೆಲ್ಲ ಕಾದು ನೋಡಬೇಕಷ್ಟೇ ಎಂದು ಹೇಳಿದರು.

ಈ ವಿಚಾರವಾಗಿ ನಾನು ಯಾವುದೇ ಒತ್ತಡ ಹಾಕಿಲ್ಲ. ಲಾಭಿ ನಡೆಸಿಲ್ಲ. ಉಪಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿದ್ದೇವೆ ಎಂಬ ತೃಪ್ತಿಯಿದೆ. ಮಂತ್ರಿಯಾಗಿ ಕೆಲಸ ಮಾಡುತ್ತಿದ್ದೇನೆ ಅದರ ಬಗ್ಗೆ ತೃಪ್ತಿಯಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read