ಶಿರಾಡಿ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಾಣ

ಹಾಸನ: ಶಿರಾಡಿ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಸಕಲೇಶಪುರ ತಾಲೂಕಿನ ದೋಣಿಗಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ಶಿರಾಡಿ ಘಾಟ್ ನಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸುರಂಗ ಮಾರ್ಗ ನಿರ್ಮಿಸಲಾಗುವುದು ಎಂದರು.

30 ಕಿಲೋಮೀಟರ್ ಉದ್ದದ ಹೊಸ ಯೋಜನೆ ಸಿದ್ಧಪಡಿಸಲಾಗಿದ್ದು, ಇದರಲ್ಲಿ 3.8 ಕಿಲೋಮೀಟರ್ ಸುರಂಗ ಮಾರ್ಗ ಇರಲಿದೆ. 10 ಕಿ.ಮೀ ಅರಣ್ಯ ವ್ಯಾಪ್ತಿಯಲ್ಲಿದ್ದು, ಅರಣ್ಯ ಇಲಾಖೆಯೊಂದಿಗೆ ಚರ್ಚಿಸಿ ಆನೆ ಕಾರಿಡಾರ್ ಸೇರಿದಂತೆ ಪ್ರಾಣಿಗಳ ಓಡಾಟಕ್ಕೆ ಧಕ್ಕೆಯಾಗದಂತೆ ಯೋಜನೆ ರೂಪಿಸಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read