ನವದೆಹಲಿ: ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೊಲಿಜಿಯಂ ನಿಂದ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ.
ಮೂಲತಃ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಅಂಜಾರಿಯಾ 2024ರಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.
ನ್ಯಾಯಮೂರ್ತಿಗಳಾದ ಎನ್.ವಿ. ಅಂಜಾರಿಯಾ, ವಿಜಯ್ ಬಿಷ್ಣೋಯ್ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸುಪ್ರೀಂ ಕೋರ್ಟ್ಗೆ ಬಡ್ತಿ ನೀಡಲು 3 ಹೈಕೋರ್ಟ್ ನ್ಯಾಯಾಧೀಶರ ಹೆಸರುಗಳನ್ನು ಶಿಫಾರಸು ಮಾಡಿದೆ.
1) ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ. ಪೋಷಕ ಹೈಕೋರ್ಟ್: ಗುಜರಾತ್
2) ಗುವಾಹಟಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ವಿಜಯ್ ಬಿಷ್ಣೋಯ್. ಪೋಷಕ ಹೈಕೋರ್ಟ್: ರಾಜಸ್ಥಾನ
3) ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿ ಅತಿಲ್ ಎಸ್. ಚಂದೂರ್ಕರ್