ತರಗತಿಯಲ್ಲಿ ಸ್ಕೂಲ್ ಬ್ಯಾಗ್ ತೆಗೆದ ವಿದ್ಯಾರ್ಥಿಗೆ ಶಾಕ್: ನಾಗರಹಾವು ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ನಾಗರಹಾವು ಪತ್ತೆಯಾಗಿದೆ.

ಎರಡನೇ ತರಗತಿ ವಿದ್ಯಾರ್ಥಿ ಭವನ್ ಶುಕ್ರವಾರ ಬೆಳಗ್ಗೆ ಶಾಲೆಗೆ ಬಂದಿದ್ದು, ಶಿಕ್ಷಕರು ಪಾಠ ಓದಲು ಪುಸ್ತಕ ತೆಗೆಯುವಂತೆ ಮಕ್ಕಳಿಗೆ ಸೂಚಿಸಿದ್ದಾರೆ. ಈ ವೇಳೆ ಭುವನ್ ಬ್ಯಾಗ್ ತೆರೆದಾಗ ನಾಗರಹಾವು ಮಲಗಿರುವುದು ಕಂಡು ಬಂದಿದೆ. ಪಕ್ಕದಲ್ಲಿ ಕುಳಿತಿದ್ದ ಸಹಪಾಠಿ ಮಣಿಕಂಠನಿಗೆ ಹಾವು ತೋರಿಸಿದ್ದಾನೆ.

ಕೂಡಲೇ ಮಣಿಕಂಠ ಬ್ಯಾಗ್ ನ ಜಿಪ್ ಎಳೆದು ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ಶಿಕ್ಷಕರು ಕೂಡಲೇ ಬ್ಯಾಗ್ ಅನ್ನು ಕೊಠಡಿಯಿಂದ ಹೊರಗೆ ತಂದು ತೆಗೆದು ನೋಡಿದಾಗ ನಾಗರಹಾವು ಇರುವುದು ಗೊತ್ತಾಗಿದೆ. ನಂತರ ಪೋಷಕರನ್ನು ಕರೆಸಿ ಬ್ಯಾಗ್ ನಲ್ಲಿದ್ದ ನಾಗರಹಾವನ್ನು ಸಮೀಪದ ಕಾಡಿಗೆ ಬಿಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read