ನವದೆಹಲಿ: ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ ಅವರು ಭಾನುವಾರ ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ನವೀಕರಣ ಕಾಮಗಾರಿಯ ಪರಿಶೀಲನೆಯ ವೇಳೆ ತಮ್ಮ ಮನೆಯ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.
ಅವರಿಗೆ 64 ವರ್ಷ ವಯಸ್ಸಾಗಿತ್ತು. ದೆಹಲಿಯ ಬಿಜೆಪಿ ಮಾಜಿ ಮುಖ್ಯಸ್ಥ ಸತೀಶ್ ಉಪಾಧ್ಯಾಯ ಅವರ ಹಿರಿಯ ಸಹೋದರರಾಗಿದ್ದ ಉಪಾಧ್ಯಾಯ ಅವರು ಕಟ್ಟಡದಿಂದ ಬಿದ್ದ ಕಾರಣ ತಲೆಗೆ ತೀವ್ರವಾಗಿ ಗಾಯಗೊಂಡರು. ಅವರು ಕಟ್ಟಡದ ನಾಲ್ಕನೇಯಿಂದ ಎರಡನೇ ಮಹಡಿಗೆ ಬಿದ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಉಪಾಧ್ಯಾಯರನ್ನು ತಕ್ಷಣವೇ ವಸಂತ್ ಕುಂಜ್ನಲ್ಲಿರುವ ಭಾರತೀಯ ಬೆನ್ನುಮೂಳೆಯ ಗಾಯಗಳ ಕೇಂದ್ರಕ್ಕೆ ಕರೆದೊಯ್ಯಲಾಯಿತು. ವೈದ್ಯರ ಪ್ರಯತ್ನದ ಹೊರತಾಗಿಯೂ ಅವರು ಬದುಕುಳಿಯಲಿಲ್ಲ.
ಪ್ರಧಾನಿ ಮೋದಿ ಸಂತಾಪ
ಪತ್ರಕರ್ತ ಉಮೇಶ್ ಉಪಾಧ್ಯಾಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಿಜಿಟಲ್ ಮಾಧ್ಯಮ ಮತ್ತು ದೂರದರ್ಶನ ಕ್ಷೇತ್ರದಲ್ಲಿ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಪತ್ರಕರ್ತ ಮತ್ತು ಬರಹಗಾರ ಉಮೇಶ್ ಉಪಾಧ್ಯಾಯ ಅವರ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನ ಪತ್ರಿಕೋದ್ಯಮ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದುಃಖದ ಸಮಯದಲ್ಲಿ ಓಂ ಶಾಂತಿ ಎಂದು ತಿಳಿಸಿದ್ದಾರೆ.
https://twitter.com/narendramodi/status/1830279796963639356

 
			 
		 
		 
		 
		 Loading ...
 Loading ... 
		 
		 
		