ಚಾಮರಾಜನಗರ: ಚಾಮರಾಜನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರಿವರದರಾಜನ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಸರಣಿ ಅಪಘಾತ ಸಂಭವಿಸಿದೆ.
ಗಾಳಿಪುರ ರಿಂಗ್ ರಸ್ತೆಯಲ್ಲಿ ಲಾರಿ, ಕಾರ್, ನಾಲ್ವರು ಬಾಲಕರಿದ್ದ ಸ್ಕೂಟರ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಸ್ಕೂಟರ್ ನಲ್ಲಿದ್ದ ನಾಲ್ವರು ಬಾಲಕರು ಮೃತಪಟ್ಟಿದ್ದಾರೆ.
ಮೆಹರಾನ್(13), ಆದಾನ್ ಪಾಷಾ(9), ರಯಾನ್(8), ಫೈಜಲ್(11) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ತಮಿಳುನಾಡಿನ ಕಡೆಗೆ ತೆರಳುತ್ತಿದ್ದ ಕಾರ್ ಮತ್ತು ಚಾಮರಾಜನಗರ ಕಡೆಗೆ ಬರುತ್ತಿದ್ದ ಲಾರಿಯ ನಡುವೆ ಸಿಲುಕಿದ ಸ್ಕೂಟರ್ ಸಂಪೂರ್ಣ ನಜ್ಗುಜ್ಜಾಗಿದೆ. ಕಾರ್, ಲಾರಿ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಕೂಟರ್ ನಲ್ಲಿದ್ದ ಬಾಲಕರು ಸಾವನ್ನಪ್ಪಿದ್ದು, ಕಾರ್ ನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.