BREAKING NEWS: ಪೆಟ್ರೋಲ್ ಸುರಿದು ಶೆಡ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಇಬ್ಬರು ಮಹಿಳೆಯರು ಸಜೀವದಹನ

ಬಾಗಲಕೋಟೆ: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಇಬ್ಬರು ಮಹಿಳೆಯರು ಸಜೀವದಹನವಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ತಗಡಿನ ಶೆಡ್ ಗೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಪರಿಣಾಮ ಶೆಡ್ ನಲ್ಲಿದ್ದ ಇಬ್ಬರು ಮಹಿಳೆಯರು ಸಜೀವದಹನವಾಗಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬೆಳಗಲಿಯಲ್ಲಿ ಈ ಘಟನೆ ನಡೆದಿದೆ.

ಬೆಳಗಲಿ ಗ್ರಾಮದ ಜೈಬಾನ್ (55) ಹಾಗೂ ಶಬಾನ್ (25) ಮೃತ ಮಹಿಳೆಯರು. ಗಾಯಾಳುಗಳಾದ ದಸ್ತಗಿರಿಸಾಬ್, ಸುಬಾನ್ ಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read