BIG NEWS: ಶಿಗ್ಗಾವಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಪಕ್ಷದ ಅಭ್ಯರ್ಥಿ, ನಾಯಕರು ನಿರಾಳ

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿದೆ.

ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ಕುನ್ನೂರು ನಾಮಪತ್ರ ಸಲ್ಲಿಸಿದ್ದರು. ಅವರ ನಾಮಪತ್ರ ತಿರಕಸ್ಕೃತಗೊಂಡಿದೆ.

ತಮ್ಮ ಪುತ್ರನಿಗೆ ಅವರು ಟಿಕೆಟ್ ಕೇಳಿದ್ದರು. ಆದರೆ, ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಮಂಜುನಾಥ್ ಕುನ್ನೂರು ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಅವರ ನಾಮಪತ್ರದೊಂದಿಗೆ ಅಫಿಡವಿಟ್ ನಲ್ಲಿ ಅಗತ್ಯ ಮತ್ತು ಸಮರ್ಪಕ ಮಾಹಿತಿ ದಾಖಲೆ ಸಲ್ಲಿಸದ ಕಾರಣ ಅವರ ನಾಮಪತ್ರ ತಿರಸ್ಕೃತವಾಗಿದೆ.

ಇನ್ನು ಟಿಕೆಟ್ ಸಿಗದೇ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅಜ್ಜಂಪೀರ್ ಖಾದ್ರಿ ಅವರು ಪಕ್ಷದ ನಾಯಕರ ಮನವೊಲಿಕೆಯ ಬಳಿಕ ನಾಮಪತ್ರ ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ನಾಯಕರು ನಿಟ್ಟುಸಿರುಬಿಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read