ಲೋಕಸಭೆ ಚುನಾವಣೆಗೆ ಸ್ಪರ್ಧೆ ಇಲ್ಲ: ರಾಜಕೀಯದಿಂದಲೇ ದೂರ ಉಳಿಯಲು ಸಂಸದ ಉದಾಸಿ ನಿರ್ಧಾರ

ಹಾವೇರಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಾವೇರಿ ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ.

ಸೋಮವಾರ ಸುತ್ತಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ಕಾರಣದಿಂದ ರಾಜಕೀಯದಿಂದಲೇ ದೂರ ಉಳಿಯುವುದಾಗಿ ತಿಳಿಸಿದ್ದಾರೆ,

ಇಷ್ಟು ವರ್ಷ ನಮ್ಮ ಉದ್ಯಮ ಸಂಸ್ಥೆಯ ವ್ಯವಹಾರಿಕ ಪಾಲುದಾರರು ಎಲ್ಲವನ್ನು ನೋಡಿಕೊಳ್ಳುತ್ತಿದ್ದು, ಇದರಿಂದ ನನಗೆ ಅನುಕೂಲವಾಗಿತ್ತು. ಆದರೆ, ಇತ್ತೀಚೆಗೆ ನಮ್ಮ ಪಾಲುದಾರರು ಅನಾರೋಗ್ಯಕ್ಕೀಡಾಗಿದ್ದಾರೆ. ಸಂಸ್ಥೆಯಲ್ಲಿ ಸುಮಾರು 250 ಮಂದಿ ಉದ್ಯೋಗಿಗಳಿದ್ದಾರೆ. ನಾನೇ ಸಂಪೂರ್ಣ ವ್ಯವಹಾರದ ಜವಾಬ್ದಾರಿ ನೋಡಿಕೊಳ್ಳಬೇಕಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕಳೆದ ವರ್ಷವೇ ನಿರ್ಧರಿಸಿದ್ದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಪಕ್ಷದ ಜಿಲ್ಲಾಧ್ಯಕ್ಷರು, ರಾಜ್ಯಾಧ್ಯಕ್ಷರು ಸೇರಿದಂತೆ ಹಿರಿಯರಿಗೆ ನನ್ನ ನಿರ್ಧಾರದ ಬಗ್ಗೆ ತಿಳಿಸಿದ್ದೇನೆ. ಮುಂಬರುವ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಹಾವೇರಿಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read