BREAKING NEWS: ಶಿವಮೊಗ್ಗದಲ್ಲಿ ಮತ್ತೊಂದು ಅವಘಡ; ಬ್ಯಾಗ್ ನಲ್ಲಿದ್ದ ವಸ್ತು ಏಕಾಏಕಿ ಸ್ಫೋಟ; ಹಲವರಿಗೆ ಗಾಯ

ಶಿವಮೊಗ್ಗ: ಬ್ಯಾಗ್ ನಲ್ಲಿದ್ದ ವಸ್ತು ಇದ್ದಕ್ಕಿದ್ದಂತೆ ಸ್ಫೋಟಗೊಂಡು ಹಲವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ.

ಬೆಡ್ ಶೀಟ್ ಮಾರಲು ಬಂದಿದ್ದ ಅಂಥೋಣಿಗೆ ಗಂಭೀರ ಗಾಯಗಳಾಗಿವೆ. ಹಲವು ಬೆಡ್ ಶೀಟ್ ವ್ಯಾಪಾರಿಗಳಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಉಮೇಶ್ ಎಂಬಾತ ಅಂಥೋಣಿ ಎಂಬುವವರ ಬಳಿ ಬ್ಯಾಗ್ ಇಟ್ಟು ತೆರಳಿದ್ದರು. ಈ ವೇಳೆ ಬ್ಯಾಗ್ ನಲ್ಲಿದ್ದ ವಸ್ತು ಸ್ಫೋಟಗೊಂಡಿದ್ದು ಬೆಡ್ ಶೀಟ್ ವ್ಯಾಪಾರಿಗಳು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಂದಿ ಬೇಟೆಗೆಂದು ತಂದಿದ್ದ ಬ್ಯಾಗ್ ನಲ್ಲಿದ್ದ ವಸ್ತು ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read