ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಹಣವನ್ನು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಇಡಿ ಕಚೇರಿಯು ಕೇಸ್ ದಾಖಲಿಸಿದೆ.
SDCC ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಅವರ ವಿರುದ್ಧ 06.06.2025 ರಂದು ಗೌರವಾನ್ವಿತ ವಿಶೇಷ ನ್ಯಾಯಾಲಯದಲ್ಲಿ (PMLA) PMLA, 2002 ರ ಅಡಿಯಲ್ಲಿ ಪ್ರಾಸಿಕ್ಯೂಷನ್ ದೂರು (PC) ಸಲ್ಲಿಸಿದೆ ಎಂದು ಇಡಿ ತಿಳಿಸಿದೆ.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನಾಭರಣ ಒತ್ತೆ ಇಟ್ಟು 62.77 ಕೋಟಿ ರೂಪಾಯಿ ವಂಚಿಸಿದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಹಣ ಅಕ್ರಮ ವರ್ಗಾವಣೆ ಕಾಯ್ದೆ ಅಡಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದೆ.
ಶಿವಮೊಗ್ಗ ಪೊಲೀಸರು ಮತ್ತು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಆಧಾರದಲ್ಲಿ ತನಿಖೆ ನಡೆಸಲಾಗಿದ್ದು, ಇದೀಗ ಜಾರಿ ನಿರ್ದೇಶನಾಲಯ ಪ್ರತ್ಯೇಕ ಪ್ರಕರಣ ದಾಖಲಿಸಿದೆ. ಇತ್ತೀಚೆಗೆ ಮಂಜುನಾಥ ಗೌಡ ಮತ್ತು ಅವರ ಪತ್ನಿಗೆ ಸೇರಿದ 13.91 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಏಪ್ರಿಲ್ 9ರಂದು ಮಂಜುನಾಥಗೌಡ ಅವರನ್ನು ಇಡಿ ಬಂಧಿಸಿತ್ತು.
ED, Bengaluru has filed a Prosecution Complaint (PC) under the PMLA, 2002 against R.M. Manjunatha Gowda, Former President of SDCC Bank & Karnataka State Co-operative Apex Bank, before the Hon’ble Special Court (PMLA) on 06.06.2025 in a case related to siphoning of funds from…
— ED (@dir_ed) June 9, 2025