BREAKING: ಶಿವಮೊಗ್ಗ ಗಾಂಧಿ ಬಜಾರ್ ಬಟ್ಟೆ ಮಾರ್ಕೆಟ್ ನಲ್ಲಿ ಅಗ್ನಿ ಅವಘಡ

ಶಿವಮೊಗ್ಗ: ಶಿವಮೊಗ್ಗದ ಪ್ರತಿಷ್ಠಿತ ವಾಣಿಜ್ಯ ವಹಿವಾಟು ಕೇಂದ್ರವಾಗಿರುವ ಗಾಂಧಿಬಜಾರ್ ನ ಬಟ್ಟೆ ಮಾರ್ಕೆಟ್ ನಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದ್ದು, 5 -6 ಬಟ್ಟೆ ಅಂಗಡಿಗಳು ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಹರಸಾಹಸ ನಡೆಸಿ ಬೆಂಕಿಯನ್ನು ನಂದಿಸಿದ್ದು, 100ಕ್ಕೂ ಅಧಿಕ ಬಟ್ಟೆ ಅಂಗಡಿಗಳಿಗೆ ಬೆಂಕಿ ವ್ಯಾಪಿಸುವುದನ್ನು ತಪ್ಪಿಸಿದ್ದಾರೆ.

ರಾತ್ರಿ 10 ಗಂಟೆ ಸುಮಾರಿಗೆ ಬಟ್ಟೆ ಅಂಗಡಿಗಳಿಂದ ಭಾರಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿ ವಿದ್ಯುತ್ ಕಡಿತ ಮಾಡಿಸಲಾಗಿದೆ. ಕೂಡಲೇ ಎರಡು ವಾಹನಗಳಲ್ಲಿ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಭಾರಿ ಹೊಗೆಯ ನಡುವೆ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಇಕ್ಕಟ್ಟಾದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಹೆಚ್ಚಿನ ಹಾನಿ ಆಗುವುದನ್ನು ತಪ್ಪಿಸಿದ್ದಾರೆ.

ಮಾಹಿತಿ ತಿಳಿದ ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read