ಗುತ್ತಿಗೆದಾರನಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ: ಶಿವಮೊಗ್ಗ ಮಹಾನಗರ ಪಾಲಿಕೆ ಸಿಬ್ಬಂದಿ ಅರೆಸ್ಟ್

ಶಿವಮೊಗ್ಗ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆಯೇ ಶಿವಮೊಗ್ಗ ಮಹಾನಗರ ಪಾಲಿಕೆ ಸಿಬ್ಬಂದಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಅಕೌಂಟ್ ಸೆಕ್ಷನ್ ಕೇಸ್ ವರ್ಕರ್ ಸಿದ್ದೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಹೊಸನಗರ ಗುತ್ತಿಗೆದಾರ ಸುನೀಲ್ ಕುಮಾರ್ ಎಂಬುವವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಕಾಮಗಾರಿ ಬಿಲ್ ಪಾಸ್ ಮಾಡಲು 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸಿದ್ದೇಶ್ ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read