ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವು

ಶಿವಮೊಗ್ಗ: ತೀವ್ರ ರಕ್ತಸ್ರಾವದಿಂದಾಗಿ ಬಾಣಂತಿ ಮೃತಪಟ್ಟ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ಟಿಪ್ಪುನಗರ ನಿವಾಸಿ ರೇಷ್ಮಾ ಮೃತಪಟ್ಟ ಬಾಣಂತಿ.

ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆರಿಗೆ ಆದ ನಂತರ ಅಲ್ಲಿಯೇ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದ ರೇಷ್ಮಾ ತೀವ್ರ ರಕ್ತಸ್ರಾವದಿಂದ ಶನಿವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ವರ್ಷ ಐವರು ಬಾಣಂತಿಯರು ಮೃತಪಟ್ಟಂತಾಗಿದೆ. ಮೂರು ದಿನಗಳ ಹಿಂದೆ ಹೆರಿಗೆ ನೋವಿನಿಂದ ಬಳಲುತ್ತಿದ್ದ ರೇಷ್ಮಾ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಇದು ಎರಡನೇ ಹೆರಿಗೆಯಾಗಿತ್ತು. ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಾಣಂತಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read