BREAKING : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿತ.!

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ವೃದ್ಧೆಯೊಬ್ಬರನ್ನು ಮನೆಯಂಗಳದಲ್ಲಿ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ವೃದ್ಧೆ ಎಂಬುದನ್ನೂ ನೋಡದೇ ಮನುಷತ್ವ, ಮಾನವೀಯತೆಯನ್ನು ಮರೆತು ನೆರೆಮನೆಯವರು ವರ್ತಿಸಿದ್ದಾರೆ. ವೃದ್ಧೆ ಕೂಗಾಡುತ್ತಿದ್ದರೂ ಕರುಣೆ ತೋರಿಲ್ಲ. ಶಿವಮೊಗ್ಗದ ಸಾಗರದಲ್ಲಿ ಈ ಘಟನೆ ನಡೆದಿದೆ.

ಕಸ ಹಾಕುವ ವಿಚಾರವಾಗಿ ಅಪ್ಪ-ಪಕ್ಕದ ಮನೆಯವರಿಗೆ ಜಗಳವಾಗಿದೆ. ವೃದ್ಧೆಯ ಜೊತೆ ಗಲಾಟೆ ಮಾಡಿದ ಪಕ್ಕದ ಮನೆಯವರು ಅವರನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಹಲ್ಲೆ ನಡೆಸಿರುವ ಪ್ರೇಮಾ, ದರ್ಶನ್ ಹಾಗೂ ಮಂಜುನಾಥ್ ಎಂಬ ಮೂವರ ವಿರುದ್ಧ ಸಾಗರದ ಅನಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read