BIG NEWS: ಶಿವಮೊಗ್ಗದಲ್ಲಿ ಕಾರ್ಮಿಕ ಇಲಾಖೆ ಕಟ್ಟಡ ಕುಸಿದು ದುರಂತ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಶಿವಮೊಗ್ಗ: ಕಾರ್ಮಿಕ ಇಲಾಖೆ ಸಮುಚ್ಚಯದ ಕಟ್ಟಡದ ಗೋಡೆ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಕೋಟೆಗಂಗೂರಿನ ಸಿದ್ಲಿಪುರ ಗ್ರಾಮದಲ್ಲಿ ನಡೆದಿದೆ.

ಮಂಜು (35) ಮೃತ ಕಾರ್ಮಿಕ. ಆತನ ಸಹೋದರ ಮುತ್ತು ಅವರಿಗೆ ಕೈ-ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಮಿಕ ಇಲಾಖೆ ಸಮುಚ್ಚಯದ ಒಂದು ಭಾಗದ ಗೋಡೆ ಕುಸಿದು ಈ ದುರಂತ ಸಂಭವಿಸಿದೆ.

ಗೋಡೆ ಅವಶೇಷಗಳಡಿ ಸಿಲುಕಿ ಮಂಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read