ಬಿ.ಕೆ. ಶಿವರಾಂ ನಿವಾಸದ ಬಳಿ ಸ್ಪಂದನಾ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸಾಂತ್ವನ ಹೇಳಿದ ಶಿವಣ್ಣ ದಂಪತಿ

ಬೆಂಗಳೂರು: ಮೂರು ದಿನಗಳ ಹಿಂದೆ ಥೈಲ್ಯಾಂಡ್ ನಲ್ಲಿ ಮೃತಪಟ್ಟ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹವನ್ನು ರಾತ್ರಿ ಒಂದು ಗಂಟೆಗೆ ಬೆಂಗಳೂರಿಗೆ ತರಲಾಗಿದೆ.

1:30 ಸುಮಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ಬಿ.ಕೆ. ಶಿವರಾಂ ನಿವಾಸಕ್ಕೆ ಮೃತದೇಹ ತರಲಾಗಿದ್ದು, ಕುಟುಂಬದವರು ಪೂಜೆ ನೆರವೇರಿಸಿದ್ದಾರೆ. ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕುಟುಂಬದವರು, ಸಂಬಂಧಿಕರು, ಆಪ್ತರು, ಬಿ.ಕೆ. ಶಿವರಾಂ ನಿವಾಸಕ್ಕೆ ಆಗಮಿಸಿ, ಪೂಜೆ ಸಲ್ಲಿಸಿ ದರ್ಶನ ಪಡೆಯಲು ಮುಂದಾಗಿದ್ದಾರೆ. ನಟ ಶಿವರಾಜ್ ಕುಮಾರ್ ದಂಪತಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ವಿಜಯ್ ರಾಘವೇಂದ್ರ, ಶ್ರೀ ಮುರುಳಿ ಸೇರಿದಂತೆ ಕುಟುಂಬದವರು ಪೂಜಾ ಕಾರ್ಯ ನೆರವೇರಿಸಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read