`ಕರ್ನಾಟಕ ಬಂದ್’ ಗೆ ಸ್ಯಾಂಡಲ್ ವುಡ್ ಸಾಥ್ : ಶಿವರಾಜ್ ಕುಮಾರ್ ಸೇರಿ ಹಲವು ನಟ-ನಟಿಯರು ಭಾಗಿ|Karnataka Bandh

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಇಂದಿನ ಬಂದ್ ಗೆ ಸ್ಯಾಂಡಲ್ ವುಡ್ ಸಹ ಬೆಂಬಲ ಸೂಚಿಸಿದೆ.

ಇಂದು ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಸೂಚಿಸಿದ್ದು, ಶಿವರಾಜ್ ಕುಮಾರ್ ನೇತೃತ್ವದಲ್ಲಿ ಗುರುರಾಜ್ ಕಲ್ಯಾಣ ಮಂಟಪದ ಬಳಿ ಚಿತ್ರೋದ್ಯಮ ಹೋರಾಟಕ್ಕೆ ಇಳಿಯಲಿದೆ. ಪ್ರತಿಭಟನೆಯಲ್ಲಿ ರಾಘವೇಂದ್ರ ರಾಜ್ ಕುಮಾರ್, ಉಪೇಂದ್ರ, ನೆನಪಿರಲಿ ಪ್ರೇಮ್, ಅಜಯ್ ರಾವ್, ಪ್ರಜ್ವಲ್ ದೇವರಾಜ್, ರಂಗಾಯಣ ರಘು, ಸಾಧು ಕೋಕಿಲಾ ಸೇರಿದಂತೆ ಕಿರುತೆರೆ ನಟ-ನಟಿಯರು ಭಾಗಿಯಾಗುವ ಸಾಧ್ಯತೆ ಇದೆ.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸೀರಿಯಲ್, ಸಿನಿಮಾ ಚಿತ್ರೀಕರಣ, ಚಿತ್ರ ಪ್ರದರ್ಶನ ಸೇರಿದಂತೆ ಎಲ್ಲಾ ಚಟುವಟಿಕೆ ಬಂದ್ ಮಾಡುವ ಮೂಲಕ ಸ್ಯಾಂಡಲ್ ವುಡ್ ಕರ್ನಾಟಕ ಬಂದ್ ಗೆ ಬೆಂಬಲ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read