ಕಾಂಗ್ರೆಸ್ ಗೆ ಹೋಗಲ್ಲ ಎಂದ ಬೆನ್ನಲ್ಲೇ ತಡರಾತ್ರಿ ಸಿಎಂ ಭೇಟಿಯಾದ ಬಿಜೆಪಿ ಶಾಸಕ: ಕುತೂಹಲ ಕೆರಳಿಸಿದ ನಡೆ

ಬೆಂಗಳೂರು: ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಹೇಳಿದ ಮರುದಿನವೇ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಶುಕ್ರವಾರ ತಡರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳ ನಡುವೆ ಈ ಬೆಳವಣಿಗೆ ನಡೆದಿದ್ದು, ಕುತೂಹಲ ಮೂಡಿಸಿದೆ.

ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದರು. ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದ ಹೆಬ್ಬಾರ್ ತಡರಾತ್ರಿ ಸಿಎಂ ಭೇಟಿಯಾಗಿ ಸುಧೀರ್ಘ ಚರ್ಚೆ ನಡೆಸಿದ್ದಾರೆ.

ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಹೆಬ್ಬಾರ್ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ ಎನ್ನಲಾಗಿದ್ದರೂ, ತಡರಾತ್ರಿ ಭೇಟಿ ಹಿಂದೆ ಅವರು ಕಾಂಗ್ರೆಸ್ ಸೇರುವ ಕುರಿತಾದ ಚರ್ಚೆ ನಡೆದಿರಬಹುದು ಎಂದು ಹೇಳಲಾಗಿದೆ.

ಈ ಹಿಂದೆ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read