ಬೆಂಗಳೂರು : ಪತಿಯೋರ್ವ ಪತ್ನಿ ಕೊಂದು ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಘಟನೆ ನಡೆದಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಹೆಬ್ಬಗೋಡಿ ನಿವಾಸಿ ಮಾನಸ (26) ಕೊಲೆಯಾದ ಮಹಿಳೆ. ಶಂಕರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಅಕ್ರಮ ಸಂಬಂಧದ ಹಿನ್ನೆಲೆ ಪತಿ ಶಂಕರ್ ಈ ಕೃತ್ಯ ಎಸಗಿದ್ದಾನೆ. ರಾತ್ರಿ ಕೆಲಸ ಮುಗಿಸಿ ಶಂಕರ್ ಮನೆಗೆ ಬಂದಾಗ ಪತ್ನಿ ಮಾನಸ ಪ್ರಿಯಕರನ ಜೊತೆ ಇರುವುದನ್ನು ನೋಡಿದ್ದಾನೆ . ಇದರಿಂದ ಆಕ್ರೋಶಗೊಂಡ ಪತಿ ಶಂಕರ್ ನಂತರ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ.
ನಂತರ ನೀನು ಬೇಡ ಹೋಗು ಎಂದು ಪತ್ನಿಯನ್ನು ಪ್ರಿಯಕರನ ಜೊತೆ ಕಳುಹಿಸಿದ್ದನು ಎನ್ನಲಾಗಿದೆ. ಆದರೆ ಪತ್ನಿ ಮಾನಸ ಪದೇ ಪದೇ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಪತಿ ಶಂಕರ್ ಈ ಕೃತ್ಯ ಎಸಗಿದ್ದಾನೆ. ಪತ್ನಿಯನ್ನು ಕೊಂದು ರುಂಡದ ಜೊತೆ ಬೈಕ್ ನಲ್ಲಿ ಸೂರ್ಯನಗರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಮಾಸನ ಮತ್ತು ಶಂಕರ್ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮಾನಸ ಬಾಳಲ್ಲಿ ಪ್ರಿಯಕರನೋರ್ವ ಎಂಟ್ರಿ ಕೊಟ್ಟಿದ್ದು, ಮಾನಸ ಬಾಳು ದುರಂತ ಅಂತ್ಯ ಕಂಡಿದೆ.