SHOCKING : ಮಾಜಿ ಲವರ್ ಗೆ ‘ಅಶ್ಲೀಲ ಸಂದೇಶ’ ಕಳುಹಿಸಿದ್ದಕ್ಕೆ ಭೀಕರ ಹಲ್ಲೆ : ರೇಣುಕಾಸ್ವಾಮಿಗೆ ಕೊಟ್ಟಂತಹ ಚಿತ್ರಹಿಂಸೆ ನೀಡಿದ ಗ್ಯಾಂಗ್.!

ಬೆಂಗಳೂರು : ಮಾಜಿ ಲವರ್ ಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇರೆಗೆ ಗ್ಯಾಂಗ್ ಒಂದು ಯುವಕನನ್ನು ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ನಡೆದು ವರ್ಷವೇ ಕಳೆದಿದೆ. ಈ ಘಟನೆ ಮಾಸುವ ಮುನ್ನವೇ ಅಂತಹದ್ದೊಂದು ಪ್ರಕರಣ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯುವಕನನ್ನು ಕಿಡ್ನ್ಯಾಪ್ ಮಾಡಿದ ಗ್ಯಾಂಗ್ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಬಂದು ಬಟ್ಟೆ ಬಿಚ್ಚಿ ವಿಕೃತವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕುಶಾಲ್ ಎಂಬ ಯುವಕನನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ ನೀಡಲಾಗಿದೆ.ಯುವತಿ ಎದುರೇ ಈ  ಘಟನೆ ನಡೆದಿದೆ.

ಘಟನೆ ಹಿನ್ನೆಲೆ
ಕಾಲೇಜಿಗೆ ಹೋಗುತ್ತಿದ್ದಾಗ ಕುಶಾಲ್ ಹಾಗೂ ಯುವಕನ ನಡುವೆ ಪ್ರೀತಿ ಚಿಗುರಿತ್ತು. ಸುಮಾರು 2 ವರ್ಷ ಪ್ರೀತಿ ಯುವತಿ ನಂತರ ಯುವಕನಿಗೆ ಗುಡ್ ಬೈ ಹೇಳಿದ್ದಳು. ನಂತರ ಬೇರೆ ಯುವಕನಿಗೆ ಕಾಳು ಹಾಕಿದ್ದಾಳೆ. ಇದರಿಂದ ರೊಚ್ಚಿಗೆದ್ದ ಕುಶಾಲ್ ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ. ಇದನ್ನು ಯುವತಿ ತನ್ನ ಸ್ನೇಹಿತನಿಗೆ ತಿಳಿಸಿದ್ದಾಳೆ. ನಂತರ ಯುವತಿ ತನ್ನ ಗೆಳೆಯ ಹಾಗೂ ಸ್ನೇಹಿತರ ಜೊತೆ ಆತನನ್ನು ಕಾರಿನಲ್ಲಿ ಅಪಹರಿಸಿಕೊಂಡು ಬರುತ್ತಾರೆ. ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮಾರಣಾಂತಿಕವಾಗಿ ಹಲ್ಲೆ ನಡೆಸುತ್ತಾರೆ.

ಮರ್ಮಾಂಗ ತುಳಿದು ವಿಕೃತಿ

ಕುಶಾಲ್ ನ ಬಟ್ಟೆ ಬಿಚ್ಚಿದ ಗ್ಯಾಂಗ್ ಕೋಲುಗಳಿಂದ ಹೊಡೆದು ಹಿಂಸಿಸಿದ್ದಾರೆ. ನಂತರ ಯುವಕನ ಮರ್ಮಾಂಗಕ್ಕೆ ಹೊಡೆದು, ತುಳಿದು ಹಿಂಸೆ ನೀಡಿದ್ದಾರೆ. ಹಲ್ಲೆ ವೇಳೆ ಪುಂಡರು ರೇಣುಕಾಸ್ವಾಮಿ ಕೇಸ್ ಪ್ರಸ್ತಾಪಿಸಿದ್ದಾರೆ. ನೀನು ಅದೇ ತರ ಕೊಲೆಯಾಗ್ತೀಯ ಎಂದು ಹೇಳಿ ಹೆದರಿಸಿದ್ದಾರೆ. ಯುವಕನನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಓಡಿದರೆ ಕಲ್ಲು ಹೊಡೆಯುತ್ತೀವಿ ಎಂದು ಬೆದರಿಸಿದ್ದಾರೆ.

ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ನಾಲ್ವರು ಆರೋಪಿಗಳಾದ ಹೇಮಂತ್, ಯಶವಂತ್, ಶಿವಶಂಕರ್, ಮತ್ತು ಶಶಾಂಕ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಯಾವುದೇ ಭಯವಿಲ್ಲದೇ ಹಾಡಹಗಲೇ ಇಂತಹ ಕೃತ್ಯ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂಬ ಆಗ್ರಹ ವ್ಯಕ್ತವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read