Shocking: ಸಿಮ್ ಕಾರ್ಡ್ ಹಾಳು ಮಾಡಿದ್ದಕ್ಕೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಮೊಬೈಲ್ ಸಿಮ್ ಕಾರ್ಡ್ ಹಾಳು ಮಾಡಿದನೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸಂಬಂಧಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳ ಮಂದರ್ಗಿ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಭರತ ಸುಭಾಷ್ ಚಂದ್ರವಾಡಿ ಎಂಬವನನ್ನು ಕೊಲೆ ಮಾಡಲಾಗಿದೆ.

ಈತ ತನ್ನ ಸಂಬಂಧಿ ಮಲ್ಲಿಕಾರ್ಜುನನ ಮೊಬೈಲ್ ನಲ್ಲಿದ್ದ ಸಿಮ್ ಕಾರ್ಡ್ ತೆಗೆದು ಇದ್ದಕ್ಕಿದ್ದಂತೆ ನೆಲಕ್ಕೆ ತಿಕ್ಕಿ ಹಾಳು ಮಾಡಿದ್ದ ಎನ್ನಲಾಗಿದೆ. ಅದಾಗಲೇ ಕುಡಿದ ಮತ್ತಿನಲ್ಲಿದ್ದ ಮಲ್ಲಿಕಾರ್ಜುನ ಆಕ್ರೋಶದಲ್ಲಿ ಭರತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read