SHOCKING : ಬೆಂಗಳೂರಲ್ಲಿ ಭಯಾನಕ ಕೃತ್ಯ : ತೆಂಗಿನಕಾಯಿ ಕದಿಯಲು ಬಂದಿದ್ದ ವ್ಯಕ್ತಿಯನ್ನು ಹೊಡೆದು ಕೊಂದ ಮಾಲೀಕ.!

ಬೆಂಗಳೂರು : ತೆಂಗಿನಕಾಯಿ ಕದಿಯಲು ಬಂದಿದ್ದ ವ್ಯಕ್ತಿಯನ್ನು ಮಾಲೀಕ ಹೊಡೆದು ಕೊಂದು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿದ್ದರಾಜು ಎಂಬ ವ್ಯಕ್ತಿ ತೆಂಗಿನನಾಯಿ ಕದಿಯಲು ಮಂಜುನಾಥ್ ಎಂಬಾತನ ತೋಟಕ್ಕೆ ಹೋಗಿದ್ದು , ಮಂಜುನಾಥ್ ದೊಣ್ಣೆಯಿಂದ ಸಿದ್ದರಾಜು ಮೇಲೆ ಹಲ್ಲೆ ನಡೆಸಿದ್ದಾನೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸಿದ್ದರಾಜು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಸ್ಥಳಕ್ಕೆ ಬಂದ ಪತ್ನಿ ಸಿದ್ದರಾಜುನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read