ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. 45 ವರ್ಷದ ಪುಟ್ಟಮ್ಮ ಬಲಿಯಾದ ಬಲಿಯಾದವರು. ಕುರಿ ಮೇಯಿಸಲು ತೆರಳಿದ್ದ ದೇಶಿಪುರ ಕಾಲೋನಿಯ ಪುಟ್ಟಮ್ಮ ಹುಲಿ ದಾಳಿಯಿಂದ ಸಾವನ್ನಪ್ಪಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ದೇಶಿಪುರ ಕಾಲೋನಿಯ ಕುರಿಗಾಹಿ ಪುಟ್ಟಮ್ಮ ಅವರನ್ನು ಕೊಂದ ಹುಲಿ ಸ್ವಲ್ಪ ದೂರ ಎಳೆದೊಯ್ದಿದೆ. ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಓಂಕಾರ ಅರಣ್ಯದಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.