Shocking : ರಾಯಚೂರಿನಲ್ಲಿ ಟೊಮೆಟೊ ಕಾವಲಿಗಿದ್ದ ಯುವಕನಿಗೆ ಚಾಕು ಇರಿತ!

ರಾಯಚೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಕಳ್ಳರ ಹಾವಳಿ ಕೂಡ ಹೆಚ್ಚಾಗಿದೆ. ರಾಯಚೂರಿನಲ್ಲಿ ಟೊಮೆಟೊ ಕಾವಲಿಗಿದ್ದ ಯುವಕನಿಗೆ ದುಷ್ಕರ್ಮಿಯೊಬ್ಬ ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ತರಕಾರಿ ಮಾರುಕಟ್ಟೆಯಲ್ಲಿ ಟೊಮೆಟೊ ಕಾವಲಿಗಿದ್ದ ರಫೀಕ್ ಎಂಬ ಯುವಕನಿಗೆ ದುಷ್ಕರ್ಮಿಯೊಬ್ಬ ತಡರಾತ್ರಿ ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ.  ತಡರಾತ್ರಿ ಟೊಮೆಟೊ ಕಾವಲಿಗಿದ್ದ ರಫೀಕ್ ಬಳಿ ಬಂದ ದುಷ್ಕರ್ಮಿಯೊಬ್ಬ ಚಾಕು ತೋರಿಸಿ ಹೆದರಿಸಲು ಪ್ರಯತ್ನಿಸಿದ್ದಾನೆ. ಅಲ್ಲೇ ಇದ್ದ ಕೋಲು ತೆಗೆದುಕೊಂಡು ದುಷ್ಕರ್ಮಿಯನ್ನು ಹೊಡೆಯಲು ಹೋದ ವೇಳೆ ದುಷ್ಕರ್ಮಿ ರಫೀಕ್ ಕುತ್ತಿಗೆ ಚಾಕು ಇರಿದಿದ್ದಾನೆ.

ಚಾಕು ಇರಿತದಿಂದ ಗಾಯಗೊಂಡ ರಫೀಕ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read