SHOCKING: ಮದುವೆಯಾಗದಿದ್ದಕ್ಕೆ ಮನನೊಂದು ಮದ್ಯದೊಂದಿಗೆ ವಿಷ ಸೇವಿಸಿ ಸಹೋದರರು ಆತ್ಮಹತ್ಯೆ

ಬೆಳಗಾವಿ: ಮದುವೆಯಾಗದಿದ್ದಕ್ಕೆ ಜಿಗುಪ್ಸೆಗೊಂಡು ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ.

ಸಂತೋಷ ರವೀಂದ್ರ ಗುಂಡೆ(55), ಅಣ್ಣಾ ಸಾಹೇಬ ರವೀಂದ್ರ ಗುಂಡೆ(50) ಮೃತಪಟ್ಟ ಸಹೋದರರು. ಇವರಿಗೆ ಮದುವೆಯಾಗಿರಲಿಲ್ಲ. ಇದರಿಂದ ಮನನೊಂದು ಮದ್ಯ ಸೇವನೆಯ ಚಟಕ್ಕೆ ಬಿದ್ದಿದ್ದರು. ಕುಡಿತದ ನಶೆಯಲ್ಲಿ ವಿಷಕಾರಿ ಪದಾರ್ಥ ಸೇವನೆ ಮಾಡ ಅಸ್ವಸ್ಥರಾಗಿದ್ದ ಇಬ್ಬರನ್ನು ಕೂಡಲೇ ಮಹಾರಾಷ್ಟ್ರದ ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾದ ಮೃತಪಟ್ಟಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read