ದಾವಣಗೆರೆ : ಕೆಲಸ ಮಾಡುತ್ತಿದ್ದಾಗಲೇ ರಕ್ತ ವಾಂತಿ ಮಾಡಿಕೊಂಡು ಕಾರ್ಮಿಕ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮರುಕುಂಟೆ ಗ್ರಾಮದಲ್ಲಿ ನಡೆದಿದೆ.
ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಕಾಮಗಾರಿ ಕೆಲಸ ಮಾಡುತ್ತಿದ್ದಾಗ ಕಾರ್ಮಿಕ ಕೆಂಚಪ್ಪ(52) ರಕ್ತ ವಾಂತಿ ಮಾಡಿಕೊಂಡು ಮೃತಪಟ್ಟಿದ್ದಾನೆ.
ಮೃತ ಕೆಂಚಪ್ಪ ಜಗಳೂರಿನ ಘಲ್ಲಾಘಟ್ಟೆ ನಿವಾಸಿ ಎಂದು ತಿಳಿದು ಬಂದಿದೆ. ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆತ ರಕ್ತ ವಾಂತಿಮಾಡಿಕೊಂಡು ಮೃತಪಟ್ಟಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಕಾರ್ಮಿಕ ಸಾವು.!