CRIME NEWS : ಬಾಡಿಗೆ ವಿಚಾರಕ್ಕೆ ಜಗಳ : ಪ್ರಯಾಣಿಕನನ್ನೇ ಹತ್ಯೆಗೈದ ಆಟೋ ಚಾಲಕ

ಬೆಂಗಳೂರು : ಬಾಡಿಗೆ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಡಿಗೆ ನೀಡುವ ವಿಚಾರಕ್ಕೆ ಜಗಳ ನಡೆದಿದ್ದು, ಕೊನೆಗೆ ಚಾಲಕ ಪ್ರಯಾಣಿಕನನ್ನೇ ಹತ್ಯೆಗೈದಿದ್ದಾನೆ.

ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಕೆಲಸ ಮುಗಿಸಿ ಮನೆಗೆ ತೆರಳಲು ಅಸ್ಸಾಂ ಮೂಲಕ ಇಬ್ಬರು ಸಹೋದರರು ಆಟೋವನ್ನು ಕೇಳಿದ್ದಾರೆ . ಬಾಡಿಗೆ ವಿಚಾರಕ್ಕೆ ಆಟೋ ಚಾಲಕ ಹಾಗೂ ಇಬ್ಬರು ಸಹೋದರರ ನಡುವೆ ಜಗಳ ನಡೆದಿದೆ. ಆಟೋ ಚಾಲಕ ಅಶ್ವಸ್ಥ್ ಎಂಬಾತ ಮಾರಕಾಸ್ತ್ರಗಳಿಂದ ಅಸ್ಸಾಂ ಮೂಲಕ ಅಹ್ಮದ್(28) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅಹ್ಮದ್(28) ಸ್ಥಳದಲ್ಲೇ ಮೃತಪಟ್ಟಿದ್ದರೆ, ಸಹೋದರ ಅಯೂಬ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಘಟನೆ ನಡೆದ ಸ್ಥಳಕ್ಕೆ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಟೋ ಚಾಲಕ ಅಶ್ವತ್ಥ್ ಬಂಧನಕ್ಕೆ ಬಲೆ ಬೀಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read