SHOCKING : ಬೆಂಗಳೂರಲ್ಲಿ ಭೀಕರ ಮರ್ಡರ್ : ನೆರೆಮನೆಯವರ ಮೇಲಿನ ದ್ವೇಷಕ್ಕೆ  8 ವರ್ಷದ ಬಾಲಕನನ್ನು ಕೊಂದು ಮೂಟೆ ಕಟ್ಟಿದ ಪಾಪಿ.!

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, 8 ವರ್ಷದ ಬಾಲಕನನ್ನು ಅಪಹರಿಸಿ ಹತ್ಯೆ ಮಾಡಲಾಗಿದೆ.

ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕ ರಮಾನಂದ (8) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಪಕ್ಕದ ಮನೆ ಮೇಲಿರುವ ದ್ವೇಷಕ್ಕೆ ಬಾಲಕನನ್ನು ಅಪಹರಿಸಿ ಹತ್ಯೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಕೆರೆಯೊಂದರ ಬಳಿ ಶವ ಎಸೆಯಲಾಗಿದೆ.

ಪಕ್ಕದ ಮನೆಯ ನಿವಾಸಿ ಮತ್ತೂರು ಎಂಬಾತ ಈ ಕೃತ್ಯ ಎಸಗಿದ್ದು, ಬಾಲಕ ರಮಾನಂದ ಕುಟುಂಬ ಹಾಗೂ ಮತ್ತೂರು ನಡುವೆ ಗಲಾಟೆ ನಡೆದಿತ್ತು. ಈ ದ್ವೇಷಕ್ಕೆ ಬಾಲಕನನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ರಾಯಸಂದ್ರ ಕೆರೆ ಬಳಿ ಬಾಲಕನ ಶವ ಪತ್ತೆಯಾಗಿದ್ದು, ಪೊಲೀಸರು ಆರೋಪಿ ಮತ್ತೂರುನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read