SHOCKING: ಕುಡಿತದ ಚಟ ಬಿಡಲು ನಾಟಿ ಔಷಧ ಸೇವಿಸಿದ್ದ ಮೂವರು ಸಾವು, ಮತ್ತೊಬ್ಬರು ಗಂಭೀರ

ಕಲಬುರಗಿ: ಕುಡಿತದ ಚಟ ಬಿಡಲು ನಾಟಿ ಔಷಧ ಸೇವಿಸಿದ್ದ ಮೂವರು ಸಾವನ್ನಪ್ಪಿದ್ದಾರೆ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ಬುಧವಾರ ಘಟನೆ ನಡೆದಿದೆ. ಸೇಡಂ ತಾಲೂಕಿನ ಬುರಗಪಲ್ಲಿ ಗ್ರಾಮದ ಲಕ್ಷ್ಮೀನರಸಿಂಹಲು(45), ಶಹಾಬಾದ ಪಟ್ಟಣದ ಗಣೇಶ್ ಬಾಬು ರಾಥೋಡ(24), ಮದಗಲ್  ಗ್ರಾಮದ ನಾಗೇಶ ಭೀಮೇಶಪ್ಪ ಗಡಗು(25) ಮೃತಪಟ್ಟವರು. ಇದೇ ನಾಟಿ ಔಷಧಿ ಸೇವಿಸಿದ ಲಕ್ಷ್ಮೀನರಸಿಂಹಲು ಅವರ ಪುತ್ರ ನಿಂಗಪ್ಪ ಸ್ಥಿತಿ ಗಂಭೀರವಾಗಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತದ ಚಟದಿಂದ ಮುಕ್ತಿ ಹೊಂದಲು ಇವರು ನಾಟಿ ಔಷಧ ಸೇವಿಸಿದ್ದು, ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read