ಬೀದರ್: ಅವಸರದಲ್ಲಿ ರೈಲು ಹತ್ತುವಾಗ ಕಾಲು ಜಾರಿ ರೈಲಿನಡಿ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಹುಮನಾಬಾದ್ ಪಟ್ಟಣದ ರೈಲು ನಿಲ್ದಾಣದಲ್ಲಿ ಬುಧವಾರ ನಡೆದಿದೆ.
ವಿಜಯಾನಂದ(31) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕಲಬುರಗಿ ಬಸವನಗರ ನಿವಾಸಿಯಾಗಿರುವ ವಿಜಯಾನಂದ ತನ್ನ ಸಹೋದರನೊಂದಿಗೆ ಭಾಲ್ಕಿ ತಾಲೂಕಿನ ಮೈಲಾರ ಮಲ್ಲಣ್ಣ ದೇವಾಲಯಕ್ಕೆ ಹೋಗಲು ಬೀದರ್ -ಕಲಬುರಗಿ ಡೆಮೋ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಹುಮನಾಬಾದ್ ನಿಲ್ದಾಣದಲ್ಲಿ ರೈಲು ನಿಂತಿದ್ದ ವೇಳೆ ವಿಜಯಾನಂದ ಕೆಳಗಿಳಿದು ನೀರು ತರಲು ಹೋಗಿದ್ದಾರೆ. ಈ ವೇಳೆ ರೈಲು ಚಲಿಸಲು ಆರಂಭಿಸುತ್ತಿದ್ದಂತೆ ಅವಸರದಲ್ಲಿ ಓಡುತ್ತಾ ರೈಲು ಹತ್ತುವಾಗ ಕಾಲು ಜಾರಿ ರೈಲಿನಡಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.