ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ.
ಹೃದಯಘಾತದಿಂದ 63 ವರ್ಷದ ಸತ್ಯನಾರಾಯಣರಾವ್ ಸಾವನ್ನಪ್ಪಿದ್ದಾರೆ. ಹಾಸನಾಂಬ ದೇವಾಲಯದ ಹಿಂಭಾಗದಲ್ಲಿ ಘಟನೆ ನಡೆದಿದೆ. ಹಾಸನ ನಗರದ ರಂಗೋಲಿ ಹಳ್ಳ ಬಡಾವಣೆಯ ನಿವಾಸಿಯಾಗಿರುವ ಸತ್ಯನಾರಾಯಣ ರಾವ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಆಟೋ ಚಾಲನೆ ವೇಳೆ ಹೃದಯಾಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದ ಆಟೋ ಚಾಲಕ ಸತ್ಯನಾರಾಯಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ ಹೃದಯಾಘಾತಕ್ಕೆ ನಾಲ್ವರು ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇದುವರೆಗೆ ಹೃದಯಾಘಾತಕ್ಕೆ 22 ಜನ ಪ್ರಾಣ ಕಳೆದುಕೊಂಡಿದ್ದಾರೆ.