ನನ್ನ ಗುಂಡು ಹೊಡೆದು ಸಾಯಿಸಿ! ಜೈನಮುನಿ ಹತ್ಯೆ ಆರೋಪಿಯಿಂದ ಹೈಡ್ರಾಮಾ

ಬೆಳಗಾವಿ : ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್  ಮಂಗಳವಾರ​ ಆದೇಶ ನೀಡಿದೆ.

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣದ ಅರೋಪಿಗಳನ್ನು ಚಿಕ್ಕೋಡಿ ಠಾಣೆ ಪೊಲೀಸರು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.  ವಿಚಾರಣೆ ವೇಳೆ ಪ್ರಕರಣದ ಎ1 ಆರೋಪಿ ನಾರಾಯಣ ಮಾಳಿ ಪೊಲೀಸರ ಮುಂದೆ ಹೈಡ್ರಾಮಾ ಮುಂದುವರೆಸಿದ್ದು, ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಗುಂಡಿಟ್ಟು ಕೊಲ್ಲಿ, ಇಲ್ಲವೇ ನಾನೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾನೆ ಎನ್ನಲಾಗಿದೆ.

ನಾರಾಯಣ ಮಾಳಿಗೆ ಕೊಟ್ಟ ಹಣ ವಾಪಸ್ ಕೊಡುವಂತೆ ಜೈನಮುನಿಗಳು ಕೇಳಿದ್ದರು. ಇದರಿಂದ ಕೋಪಗೊಂಡಿದ್ದ ನಾರಾಯಣ ಮಾಳಿ, ಸ್ನೇಹಿತ ಹಸನ್ ದಲಾಯತ್ ಜೊತೆಗೆ ಸೇರಿ ಕೊಲೆ ಮಾಡಿದ್ದಾನೆ. ಕೊಲೆ ಮಡಿ ಶವವನ್ನು ಗೋಣಿ ಚೀಲದಲ್ಲಿ ಕಟ್ಟಿ ಬೈಕ್ ನಲ್ಲಿ ಕಟಕಬಾವಿವರೆಗೆ 35 ಕಿ.ಮಿ ಸಾಗಿಸಿದ್ದರು. ನಂತರ ಗ್ರಾಮದ ಕೊಳವೆ ಬಾವಿಗೆ ಶವವನ್ನು ಪೀಸ್ ಪೀಸ್ ಮಾಡಿ ಬೀಸಾಕಿದ್ದರು. ಜೊತೆಗೆ ಜೈನಮುನಿ ಗೆ ಸೇರಿದ ಬಟ್ಟೆ ಹಾಗೂ ಡೈರಿಯನ್ನು ಸುಟ್ಟುಹಾಕಿದ್ದಾರೆ. ಸದ್ಯ ಪೊಲೀಸರು ಜೈನಮುನಿ ಡೈರಿಯಲ್ಲಿ ಏನು ಬರೆದಿದ್ದರು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read