ನವದೆಹಲಿ: ಆಂಧ್ರಪ್ರದೇಶದ ಶ್ರೀಕಾಕುಳಂನ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 10ಜನರು ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ. ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಶ್ರೀಕಾಕುಳಂ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ದುರಂತದಿಂದ ತೀವ್ರ ದು:ಖಿತನಾಗಿದ್ದೇನೆ. ತಮ್ಮ ಆತ್ಮೀಯರನ್ನು ಕಳೆದುಕೊಂಡವರೊಂದಿಗೆ ನಮ್ಮ ಸಂತಾಪಗಳು. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಇದೇ ವೇಳೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ ೫೦ ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
