ಕೋಲಾರ: ಮಾವು ಬೆಳೆಗೆ ಬೆಲೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕಂಗಾಲಾಗಿರುವ ಕೋಲಾರ ರೈತರು, ಮಾವು ಬೆಳೆಗಾರರು ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿದ್ದಾರೆ.
ಮಾವಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ನಾಳೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಬಂದ್ ಗೆ ಮಾವು ಬೆಳೆಗಾರರ ಸಂಘಟನೆ ನಿರ್ಧರಿಸಿದೆ. ಶ್ರೀನಿವಾಸಪುರದ ಮಾವು ಮಾರ್ಕೆಟ್ ನಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮಾವು ಬೆಳೆಗಾರರ ಸಂಘದ ಅಧ್ಯಕ್ಷ ಚಿನ್ನಪ್ಪ ರೆಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಾಳೆ ಶ್ರೀನಿವಸಪುರ ಬಂದ್ ಗೆ ತೀರ್ಮಾನಿಸಲಾಗಿದೆ. ಶ್ರೀನಿವಸಪುರ ಬಂದ್ ಗೆ ಪ್ರಾಂತ ರೈತ ಸಂಘಟನೆ, ಸೇರಿದಂತೆ ವಿವಿಧ ಸಂಘಟನೆಗಳು, ಬಿಜೆಪಿ-ಜೆಡಿಎಸ್ ಕೂಡ ಬೆಂಬಲಿಸಿದ್ದು, ನಾಳೆ ಶ್ರೀನಿವಾಸಪುರ ತಾಲೂಕು ಸಂಪೂರ್ಣ ಸ್ತಬ್ಧಗೊಳ್ಳಲಿದೆ.