ಸಿದ್ಧರಾಮಯ್ಯ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆಯೇ ಭಿನ್ನಮತ ಸ್ಪೋಟ

ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ಭಿನ್ನಮತ ಸ್ಫೋಟಗೊಂಡಿದ್ದು, ರಾಮದುರ್ಗ ಕ್ಷೇತ್ರದಿಂದ ಚಿಕ್ಕರೇವಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಪ್ರತಿಭಟನೆ ನಡೆಸಲಾಗಿದೆ.

ಸಿದ್ಧರಾಮಯ್ಯ ಅವರು ತಂಗಿದ್ದ ಹೋಟೆಲ್ ಎದುರು ಅರ್ಧ ಗಂಟೆ ಚಿಕ್ಕರೇವಣ್ಣ ಬೆಂಬಲಿಗರು ಹೈಡ್ರಾಮಾ ನಡೆಸಿದ್ದಾರೆ. ಬೆಳಗ್ಗೆ ಭೇಟಿಯಾಗುತ್ತೇನೆ ಎಂದು ಸಿದ್ದರಾಮಯ್ಯ ಅವರನ್ನು ವಾಪಸ್ ಕಳುಹಿಸಿದ್ದಾರೆ. ಬಂದ ದಾರಿಗೆ ಸುಂಕವಿಲ್ಲ ಎನ್ನುವಂತೆ ಚಿಕ್ಕರೇವಣ್ಣ ಬೆಂಬಲಿಗರು ವಾಪಸ್ ತೆರಳಿದ್ದಾರೆ.

ಎರಡು ದಿನದ ಹಿಂದೆ ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಚಿಕ್ಕರೇವಣ್ಣ ಅವರ ಮನವೊಲಿಸಿ ಅಶೋಕ ಪಟ್ಟಣ ಸ್ಪರ್ಧಿಸುತ್ತಾರೆ ಎಂದು ಘೋಷಣೆ ಮಾಡಲಾಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾತಿಗೆ ಚಿಕ್ಕರೇವಣ್ಣ ಕೂಡ ಒಪ್ಪಿಗೆ ನೀಡಿದ್ದರು. ಇದೀಗ ಅವರು ಉಲ್ಟಾ ಹೊಡೆದು ಬೆಂಬಲಿಗರನ್ನು ಕಳುಹಿಸಿ ಹೈಡ್ರಾಮಾ ನಡೆಸಿದ್ದಾರೆ. ತಮ್ಮ ಬೆಂಬಲಿಗರ ಮೂಲಕ ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರುವ ತಂತ್ರ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read