2 ನೇ ಬಾರಿಗೆ ಮುಖ್ಯಮಂತ್ರಿಯಾಗ್ತಿರುವ ಸಿದ್ಧರಾಮಯ್ಯರಿಗೆ ಅಭಿನಂದನೆಗಳು, ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಗೆ ಶುಭಾಶಯಗಳು; ಬೆಂಬಲಿಗರಿಂದ ಪೋಸ್ಟರ್ ವಾರ್

 ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಮುಖ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಪೈಪೋಟಿ ತೀವ್ರಗೊಂಡಿದ್ದು, ಭಾನುವಾರ ಅವರ ಬೆಂಬಲಿಗರು ಆಯಾ ನಾಯಕರನ್ನು ಬೆಂಬಲಿಸುವ ಪೋಸ್ಟರ್‌ಗಳನ್ನು ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರು ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಅವರ ನಿವಾಸದ ಹೊರಗೆ “ಕರ್ನಾಟಕದ ಮುಂದಿನ ಸಿಎಂ” ಎಂದು ಉಲ್ಲೇಖಿಸುವ ಪೋಸ್ಟರ್ ಹಾಕಿದ್ದಾರೆ.

ಬೆಂಗಳೂರಿನಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಮನೆಯ ಹೊರಗೆ ಮೇ 15 ರಂದು “ಕರ್ನಾಟಕದ ನೂತನ ಮುಖ್ಯಮಂತ್ರಿಗೆ ಜನ್ಮದಿನದ ಶುಭಾಶಯಗಳು” ಎಂದು ಬರೆದಿರುವ ಪೋಸ್ಟರ್‌ಗಳನ್ನು ಹಾಕಲಾಗಿದೆ.

ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ(ಸಿಎಲ್‌ಪಿ) ಸಭೆ ನಡೆಯಲಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷವು ಕರ್ನಾಟಕಕ್ಕೆ ಮುಖ್ಯಮಂತ್ರಿಯನ್ನು ನಿರ್ಧರಿಸಲು ಪಕ್ಷದ ಹೈಕಮಾಂಡ್‌ಗೆ ಬಿಡುವ ನಿರ್ಣಯವನ್ನು ಅಂಗೀಕರಿಸುವ ನಿರೀಕ್ಷೆಯಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read