BIG NEWS : 5 ವರ್ಷ ಸಿದ್ದರಾಮಯ್ಯನವರೇ ರಾಜ್ಯದ ಸಿಎಂ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು : 5 ವರ್ಷ ಸಿದ್ದರಾಮಯ್ಯನವರೇ ರಾಜ್ಯದ ಸಿಎಂ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಇರುತ್ತಾರೆ. ಡಿಕೆ ಶಿವಕುಮಾರ್ ಅವರೇ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಅಂತ ಹೇಳಿದ್ದಾರೆ. ಡಿಕೆಶಿ ಹೇಳಿದ ಮೇಲೆ ಮುಗೀತು, ಬದಲಾವಣೆ ಇಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಕೂಡ ನಾನೇ 5 ವರ್ಷ ಸಿಎಂ ಎಂದು ಹೇಳಿರುವಾಗ ಬದಲಾವಣೆ ಮಾತೇ ಇಲ್ಲ, ನವೆಂಬರ್ ನಲ್ಲಿ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ ಎಂದರು.

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಿದ ಸಚಿವರು ‘ ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಯಾವಾಗ ಬೇಕಾದರೂ ಸಂಪುಟ ವಿಸ್ತರಣೆ ಆಗಬಹುದು ಎಂದು ಅವರು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read