ಇನ್ನೂ 3 ವರ್ಷ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಕೆ: ಸಚಿವ ಬೈರತಿ ಸುರೇಶ್

ಬಳ್ಳಾರಿ: ಎರಡು ಬಾರಿ ಮುಖ್ಯಮಂತ್ರಿಯಾಗಿ ಅತ್ಯುತ್ತಮ ಆಡಳಿತ ನೀಡಿರುವ ಸಿದ್ಧರಾಮಯ್ಯ ಅವರು ಇನ್ನೂ ಮೂರು ವರ್ಷ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಕಲ್ಲುಕಂಬ ಗ್ರಾಮದಲ್ಲಿ ಭಾನುವಾರ ಭಕ್ತ ಕನಕದಾಸ ಮತ್ತು ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.

ಎರಡು ಬಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅತ್ಯುತ್ತಮ ಆಡಳಿತ ನೀಡಿದ್ದಾರೆ. ಇನ್ನು ಮೂರು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆದು ಹತ್ತು ವರ್ಷ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಹೇಳಿದ್ದಾರೆ.

ದಕ್ಷ ಆಡಳಿತ ನೀಡುವ ಮುತ್ಸದ್ದಿ ನಾಯಕರಾಗಿರುವ ಸಿದ್ದರಾಮಯ್ಯ ಅವರ ವಿರುದ್ಧ ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಿ ಕಪ್ಪು ಚುಕ್ಕೆ ಇಡುವ ಹುನ್ನಾರ ನಡೆಸಿವೆ. ಆದರೆ, ಅವರ ಪ್ರಯತ್ನ ಸಾಧ್ಯವಾಗಿಲ್ಲ. ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read