ಅಪರೂಪದ ‘ಕಾಡುಪಾಪ’ ಪತ್ತೆ

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಅಪರೂಪದ ಕಾಡುಪಾಪ ಪತ್ತೆಯಾಗಿದ್ದು, ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಶನಿವಾರದಂದು ಸಾಗರ ಪಟ್ಟಣದ ಬಡಾವಣೆ ಒಂದರಲ್ಲಿನ ಖಾಲಿ ಸೈಟ್ ನಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಸ್ವಚ್ಛಗೊಳಿಸುವ ವೇಳೆ ಮರದ ಮೇಲೆ ಕುಳಿತಿದ್ದ ಈ ಅಪರೂಪದ ಕಾಡು ಪಾಪ ಕಾಣಿಸಿಕೊಂಡಿದೆ.

ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ನೇತೃತ್ವದ ತಂಡ, ಈ ಕಾಡು ಪಾಪವನ್ನು ಸುರಕ್ಷಿತವಾಗಿ ಹಿಡಿದು ಬಳಿಕ ಕೆರೆಕೊಪ್ಪದ ಕಾಡಿಗೆ ಬಿಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read