ಕುಡಿತದ ಚಟಕ್ಕೆ ಹಣ ಕೊಟ್ಟಿಲ್ಲ ಎಂದು ತಂದೆಯನ್ನೇ ಕೊಲೆಗೈದ ಮಗ

ಬೆಳಗಾವಿ: ಕುಡಿತದ ದಾಸನಾಗಿದ್ದ ಮಗ ತನ್ನ ತಂದೆಯನ್ನೇ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದಲ್ಲಿ ನಡೆದಿದೆ.

ಮದ್ಯ ಸೇವನೆಗೆ ಹಣ ಕೊಟ್ಟಿಲ್ಲ ಎಂದು ಕೋಪಗೊಂಡ ಮಗ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ತುಕಾರಾಂ ವನಖಂಡೆ (89) ಮೃತ ದುರ್ದೈವಿ. ಬಾಳಾಸಾಬ ಮಲ್ಲು (49) ತಂದೆಯನ್ನೇ ಕೊಲೆಗೈದ ಮಗ. ವೃದ್ಧ ತಂದೆಯನ್ನು ನೋಡಿಕೊಳ್ಳಬೇಕಿದ್ದ ಮಗ ಕುಡಿತದ ಚಟಕ್ಕೆ ಬಿದ್ದು, ವ್ಯಸನಕ್ಕಾಗಿ ತಂದೆಯ ಬಳಿಯೇ ಹಣ ನೀಡುವಂತೆ ಒತ್ತಾಯಿಸುತ್ತಿದ್ದ. ತಂದೆ ಹಣ ಕೊಡಲು ಒಪ್ಪದಿದ್ದಾಗ ಮಾರಣಾಂತಿಕವಾಗಿ ತಂದೆ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ತಂದೆ ತುಕಾರಾಂ ಅವರನ್ನು ಮಹಾರಾಷ್ಟ್ರದ ಮೀರಜ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಮಗ ಬಾಳಾಸಾಬ ಮಲ್ಲುನನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read