SHOCKING NEWS: ಹೆತ್ತ ತಾಯಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಮಗ

ದೊಡ್ಡಬಳ್ಳಾಪುರ: ಮಗನೊಬ್ಬ ಹೆತ್ತ ತಾಯಿಯ ಕತ್ತು ಕುಯ್ದು ಕೊಲೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಗರಾಳಗುಟ್ಟೆ ಬಳಿ ನಡೆದಿದೆ.

ರತ್ನಮ್ಮ (56) ಮಗನಿಂದಲೇ ಕೊಲೆಯಾದ ಮಹಿಳೆ. ಗಂಗರಾಜು ತಾಯಿಯನ್ನೇ ಕೊಂದ ಮಗ. ತಾಯಿ-ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ. ಕೋಪದಲ್ಲಿ ಗಂಗರಾಜು ಚಾಕುವಿನಿಂದ ತಾಯಿಯ ಕತ್ತು ಸೀಳಿ ಕೊಲೆಗೈದಿದ್ದಾನೆ. ಕೃತ್ಯದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read