ಪುತ್ರನಿಗೆ ಕೊಡದಿದ್ರೆ ನನಗೆ ಟಿಕೆಟ್ ಕೊಡಲಿ: ಹೊಸ ಬೇಡಿಕೆ ಇಟ್ಟ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಕೂಡ ಆಕಾಂಕ್ಷಿ ಎಂದು ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ.

ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಲೋಕ್ ವಿಶ್ವನಾಥ್ ಅವರಿಗೆ ಟಿಕೆಟ್ ನೀಡದಿದ್ದರೇ ನನಗೆ ಕೊಡಲಿ ಎಂದು ಹೊಸ ಬೇಡಿಕೆ ಇಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾಜಿ ಸಚಿವ ಡಾ.ಕೆ. ಸುಧಾಕರ್ ಬಗ್ಗೆ ವಿರೋಧಿ ಅಲೆ ಇದೆ. ಸುಧಾಕರ್ ಗೆ ಟಿಕೆಟ್ ನೀಡಬೇಡಿ ಎಂದು ಸಾಕಷ್ಟು ಜನ ಹೇಳುತ್ತಿದ್ದಾರೆ. ಸುಧಾಕರ್ ನನ್ನ ಬಳಿಯೂ ಮಾತನಾಡಿ ನನಗೆ ಯಾರೂ ಗೌರವಿಸುತ್ತಿಲ್ಲ. ಯಾರು ಮಾತನಾಡುತ್ತಿಲ್ಲ, ಸಂಸದನಾಗಿ ಇರುತ್ತೇನೆ ಎಂದು ಹೇಳಿದ್ದಾರೆ. ಆದರೆ, ನನ್ನ ಮಗ ಇನ್ನೂ 25 ವರ್ಷ ರಾಜಕೀಯ ಮಾಡಬೇಕಿದೆ. ಸರ್ವೆಯಲ್ಲೂ ಅಲೋಕ್ ಗೆ ಟಿಕೆಟ್ ನೀಡುವಂತೆ ಒಲವು ಇದೆ. ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read