BIG NEWS: ತಂದೆ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಿವ್ಯಾಂಗ ಮಗ

ದಾವಣಗೆರೆ: ತಂದೆ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಳಿಯಲ್ಲಿ ನಡೆದಿದೆ.

ಇಲ್ಲಿನ ಚೀಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. 65 ವರ್ಷದ ತಂದೆ ಚಂದ್ರ ನಾಯ್ಕ್ ಮೃತಪಟ್ಟಿದ್ದರು, ತಂದೆ ಸಾವಿನಿಂದ ಮಗ ಶಿವಕುಮಾರ್ (32) ತೀವ್ರವಾಗಿ ಬೇಸರಗೊಂಡಿದ್ದ. ಈಗ ವಿಷ ಸೇವಿಸಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ದಿವ್ಯಾಂಗನಾಗಿದ್ದ ಮಗ ಶಿವಕುಮಾರ್ ಗೆ ತಂದೆಯೇ ಆಸರೆಯಾಗಿದ್ದರು. ತಂದೆಯ ಅಗಲಿಕೆಯಿಂದ ದಿಕ್ಕೇ ತೋಚದಂತಾಗಿದ್ದ ಶಿವಕುಮಾರ್, ತಾನೂ ಸಾವಿನ ಹಾದಿ ಹಿಡಿದಿದ್ದಾನೆ. ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read