ಕ್ಷಮಿಸು ಕರ್ನಾಟಕ, ನಿಮ್ಮ ಮೇಲಿನ ಪ್ರೀತಿ ನನ್ನ ಅಹಂಕಾರಕ್ಕಿಂತ ದೊಡ್ಡದು: ಕೊನೆಗೂ ಕನ್ನಡಿಗರ ಕ್ಷಮೆಯಾಚಿಸಿದ ಸೋನು ನಿಗಮ್

ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಂಗೀತ ಕಾರ್ಯಕ್ರಮದಲ್ಲಿ ನೀಡಿದ ತಮ್ಮ ಹೇಳಿಕೆ ಬಗ್ಗೆ ವಿವಾದಕ್ಕೆ ಕಾರಣವಾಗುತ್ತಲೇ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಕರ್ನಾಟಕದ ಜನರಿಗೆ ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ.

ಕನ್ನಡ ಭಾಷೆಯ ಬಗ್ಗೆ ಸಂವೇದನಾಶೀಲವಲ್ಲದ ಕಾಮೆಂಟ್‌ಗಾಗಿ ಟೀಕೆಗೆ ಗುರಿಯಾದ ಗಾಯಕ, ಪಶ್ಚಾತ್ತಾಪ ವ್ಯಕ್ತಪಡಿಸಲು ಮತ್ತು ರಾಜ್ಯದ ಮೇಲಿನ ತನ್ನ ಪ್ರೀತಿಯನ್ನು Instagram ನಲ್ಲಿ ಪುನರುಚ್ಚರಿಸಿದ್ದಾರೆ.

“ಕ್ಷಮಿಸಿ ಕರ್ನಾಟಕ. ನಿಮ್ಮ ಮೇಲಿನ ನನ್ನ ಪ್ರೀತಿ ನನ್ನ ಅಹಂಕಾರಕ್ಕಿಂತ ದೊಡ್ಡದು. ನಿನ್ನ ಮೇಲೆ ಯಾವಾಗಲೂ ಪ್ರೀತಿ” ಎಂದು ಸೋನು ನಿಗಮ್ ತಿಳಿಸಿದ್ದಾರೆ.

ಅವರು ನೀಡಿದ ಹೇಳೀಕೆಗೆ ವ್ಯಾಪಕ ಪ್ರತಿಕ್ರಿಯೆ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಈ ಪೋಸ್ಟ್ ಬಂದಿದೆ.

ಏಪ್ರಿಲ್ 25 ರಂದು ಬೆಂಗಳೂರಿನ ಕಾಲೇಜು ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಅವರಿಗೆ ಕನ್ನಡ ಹಾಡುಗಳನ್ನು ಹಾಡುವಂತೆ ಒತ್ತಾಯಿಸಿದ್ದರು. ಅದಕ್ಕೆ ಸೋನು ನಿಗಮ್ ಸಿಟ್ಟಾಗಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 26 ನಾಗರಿಕರು ಪ್ರಾಣ ಕಳೆದುಕೊಂಡ ಘಟನೆಯನ್ನು ಉಲ್ಲೇಖಿಸಿ ಕನ್ನಡ ಹಾಡುಗಳ ಹಾಡಿ ಎಂಬ ಬೇಡಿಕೆಯನ್ನು ಜೋಡಿಸುವ ಮೂಲಕ ಪ್ರತಿಕ್ರಿಯಿಸಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.

View this post on Instagram

A post shared by Sonu Nigam (@sonunigamofficial)

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read